December 15, 2025

ಪ್ರಯಾಣಿಕನಿಗೆ ಉಸಿರಾಟದ ಸಮಸ್ಯೆ:
ಇಂದೋರ್‌ನಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ವಿಮಾನ

0
s7fv5o9_vistara-650_625x300_25_February_19.jpg

ಇಂದೋರ್: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಪ್ರಯಾಣಿಕರೊಬ್ಬರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿ, ಪ್ರಜ್ಞೆ ತಪ್ಪಿದರು.

ಈ ಹಿನ್ನೆಲೆಯಲ್ಲಿ ಅವರಿಗೆ ತುರ್ತಾಗಿ ವೈದ್ಯಕೀಯ ಚಿಕಿತ್ಸೆ ಕೊಡಿಸಲು ವಿಮಾನವನ್ನು ಇಂದೋರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯಿತು. ಇಂದೋರ್ ಏರ್ಪೋರ್ಟ್ ನಿಂದ ಆ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಸುದ್ದಿಸಂಸ್ಥೆ ಜೊತೆ ಮಾತನಾಡಿದ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು, ಬೆಂಗಳೂರಿನಿಂದ ಹೊರಟ ವಿಸ್ತಾರ ವಿಮಾನ ಯುಕೆ -818 ಗುರುವಾರ ರಾತ್ರಿ 9.30 ಕ್ಕೆ ಇಂದೋರ್‌ಗೆ ಬಂದಿಳಿಯಿತು ಮತ್ತು ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಹೇಳಿದರು.

ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮನೋಜ್ ಕುಮಾರ್ ಅಗರ್​ವಾಲ್ ಎಂಬುವವರು ಈ ರೀತಿ ದುರಂತವಾಗಿ ಸಾವನ್ನಪ್ಪಿದ ವ್ಯಕ್ತಿ. 50 ವರ್ಷದ ಮನೋಜ್ ಕುಮಾರ್ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು. ನಿನ್ನೆ ರಾತ್ರಿ 9.30ಕ್ಕೆ ವಿಮಾನ ಇಂದೋರ್​ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆಯಿತು. ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿ, ಆಸ್ಪತ್ರೆಗೆ ಸೇರಿಸಿದರೂ ಆ ಪ್ರಯಾಣಿಕ ಬದುಕುಳಿಯಲಿಲ್ಲ.

ಮನೋಜ್ ಕುಮಾರ್ ತಿವಾರ್ ಉದ್ಯಮಿಯಾಗಿದ್ದು, ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವಾಪಾಸ್ ದೆಹಲಿಗೆ ಹೊರಟಿದ್ದರು. ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದ ಮನೋಜ್ ಕುಮಾರ್ ಅಗರವಾಲ್ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆಯಾಗುತ್ತಿರುವುದಾಗಿ ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣ ಅವರು ಪ್ರಜ್ಞೆ ತಪ್ಪಿದರು. ಹೀಗಾಗಿ, ಪೈಲಟ್ ವಿಮಾನವನ್ನು ಇಂದೋರ್​ನತ್ತ ತಿರುಗಿಸಿದರು. ತಕ್ಷಣ ಮನೋಜ್ ಕುಮಾರ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಅವರು ಸಾವನ್ನಪ್ಪಿದ್ದರು ಇಂದೋರ್ ವಿಮಾನ ನಿಲ್ದಾಣದ ಉಸ್ತುವಾರಿ ನಿರ್ದೇಶಕ ಪ್ರಮೋದ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಹೃದಯಾಘಾತದಿಂದ ಮನೋಜ್ ಕುಮಾರ್ ಸಾವನ್ನಪ್ಪಿರುವ ಸಾಧ್ಯತೆಯಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿ ಮೂಲದ ಮನೋಜ್ ಕುಮಾರ್ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ದೆಹಲಿಗೆ ವಾಪಾಸ್ ತೆರಳುವಾಗ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!