ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ
ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಆ.17ರ ಶನಿವಾರ ವರದಿಯಾಗಿದೆ.
ಕೆಲ ತಿಂಗಳ ಹಿಂದಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿದ್ದ ಈ ದೇವಸ್ಥಾನದಲ್ಲಿ ಅಂದಾಜು ಸುಮಾರು 40 ಸಾವಿರಕ್ಕೂ ಅಧಿಕ ನಗದು ಕಳ್ಳತನ ಆಗಿದೆ ಎಂದು ತಿಳಿದು ಬಂದಿದೆ.
ಬಾಗಿಲ ಚಿಲಕದ ಸ್ಕ್ರೂ ತೆಗೆದು ಸುತ್ತು ಪೌಳಿ ಪ್ರವೇಶಿಸಿದ ಕಳ್ಳ, ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಿದ ಹಣವನ್ನು ಎಗರಿಸಿದ್ದಾನೆ.




