ಮಂಗಳೂರಿನಲ್ಲಿ ಟೈಯರ್ಗೆ ಬೆಂಕಿ ಹಚ್ಚಿ ರಸ್ತೆ ತಡೆ: ಇನಾಯತ್ ಅಲಿ, ಮಿಥುನ್ ರೈ, ಐವನ್ ಡಿಸೋಜಾ ಸೇರಿ ಹಲವರು ಪೊಲೀಸ್ ವಶಕ್ಕೆ
ಮಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡರು ಪ್ರತಿಭಟನಾ ಸಭೆಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದರು.
ಈ ವೇಳೆ ಹಲವು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಕಾಂಗ್ರೆಸ್ ಮುಖಂಡ ಮಿಥುನ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಕಾಶ್ ರಾಥೋಡ್, ಇನಾಯತ್ ಅಲಿ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ. ಮಹಾನಗರ ಪಾಲಿಕೆ ಎದುರು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಇಟ್ಟು ಪ್ರತಿಭಟನೆ ಮಾಡಲಾಯಿತು.




