July 13, 2026

ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್: ಅರ್ಜಿ ವಿಚಾರಣೆ ಆ.29ರವರೆಗೆ ಮುಂದೂಡಿ ಹೈಕೋರ್ಟ್ ಸೂಚನೆ

0
siddaramaiah-174339295-16x9_1.jpg

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು.

ಇದೀಗ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಆಗಸ್ಟ್ 29ರ ವರೆಗೆ ವಿಚಾರಣೆಯನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸೂಚನೆ ಕೊಟ್ಟಿದ್ದಾರೆ.

ರಾಜ್ಯಪಾಲರ ಕ್ರಮ ಕಾನೂನುಬಾಹಿರ ಹಾಗೂ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದು ತಮ್ಮ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ. ಅಲ್ಲದೇ ಆಡಳಿತವನ್ನೂ ಬಾಧಿಸಿ ರಾಜಕೀಯ ಅಸ್ಥಿರತೆಗೆ ಕಾರಣವಾಗುವ ಸಾಧ್ಯತೆಯೂ ಇದೆ, ಎಂದು ಮುಖ್ಯಮಂತ್ರಿ ಮಧ್ಯಂತರ ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!