December 16, 2025

ಧನ್ಬಾದ್ ಹಿಟ್ ಆ್ಯಂಡ್ ರನ್ ಪ್ರಕರಣ:
ಸಿಬಿಐ ಯನ್ನು ತರಾಟೆಗೆ ತೆಗೆದುಕೊಂಡ ಜಾರ್ಖಂಡ್ ಕೋರ್ಟ್

0
397515-judge-uttam-anand-killed.jpg

ರಾಂಚಿ: ಧನ್ಬಾದ್ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಚಾರ್ಜ್ ಶೀಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಾರ್ಖಂಡ್ ಹೈಕೋರ್ಟ್, ತನಿಖಾ ಸಂಸ್ಥೆ ಸೆಕ್ರೆಟರಿಯೇಟ್ ನಲ್ಲಿ ‘ಬಾಬು’ಗಳಂತೆ ಕೆಲಸ ಮಾಡುತ್ತಿರುವುದನ್ನು ಗಮನಿಸಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವಾಗ, ಮುಖ್ಯ ನ್ಯಾಯಮೂರ್ತಿ ಡಾ.ರವಿ ರಂಜನ್ ಮತ್ತು ನ್ಯಾಯಮೂರ್ತಿ ಸುಜಿತ್ ನಾರಾಯಣ್ ಪ್ರಸಾದ್ ಅವರ ವಿಭಾಗೀಯ ಪೀಠವು ಜಾರ್ಖಂಡ್ ಹೈಕೋರ್ಟ್ ಪ್ರಕರಣವನ್ನು ಮೇಲ್ವಿಚಾರಣೆ ಮಾಡುತ್ತಿದ್ದರೂ ಸಹ ಚಾರ್ಜ್ ಶೀಟ್ ಸಲ್ಲಿಸುವ ಮೊದಲು ಅದನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಸಿಬಿಐಗೆ ಛೀಮಾರಿ ಹಾಕಿತು. ಮೂರು ತಿಂಗಳ ತನಿಖೆಯ ಹೊರತಾಗಿಯೂ ಯಾವುದೇ ತೀರ್ಮಾನಕ್ಕೆ ಬರಲು ಸಂಸ್ಥೆ ವಿಫಲವಾಗಿರುವುದರಿಂದ ತನಿಖೆಯಲ್ಲಿ ಯಾವುದೇ ಪ್ರಗತಿಯಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ.

ಕೊಲೆಯ ಉದ್ದೇಶವನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸದ ಕಾರಣ ಸಿಬಿಐ ಪ್ರಕರಣವನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ನ್ಯಾಯಾಲಯವು ಗಮನಿಸಿದೆ. “ಉದ್ದೇಶ ತಿಳಿದಿಲ್ಲವಾದ್ದರಿಂದ, ಪ್ರಕರಣದ ಕೋರ್ಸ್ ಅನ್ನು ಇನ್ನೊಂದು ದಿಕ್ಕಿಗೆ ಬದಲಾಯಿಸಲಾಗುತ್ತದೆ, ಸೆಕ್ಷನ್ 302 ರ ಬದಲಾಗಿ ಸೆಕ್ಷನ್ 304 ರ ಕಡೆಗೆ ತಿರುಗಿಸುತ್ತದೆ ಮತ್ತು ಅಪಘಾತದ ಹೆಸರಿನಲ್ಲಿ ಆರೋಪಿ ಸುಲಭವಾಗಿ ತಪ್ಪಿಸಿಕೊಳ್ಳುತ್ತಾನೆ” ಎಂದು ನ್ಯಾಯಾಲಯ ಎಚ್ಚರಿಸಿದೆ.

ನ್ಯಾಯಾಧೀಶರಿಗೆ ಆಟೋರಿಕ್ಷಾ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿರುವುದು ಸಿಸಿಟಿವಿ ಫುಟೇಜ್ ನಲ್ಲಿ ದಾಖಲಾಗಿದೆ. ನ್ಯಾಯಾಧೀಶರು ಜುಲೈ 28 ರಂದು ವಾಕಿಂಗ್ ಮಾಡುತ್ತಿದ್ದಾಗ ಆಟೋ ರಿಕ್ಷಾ ಡಿಕ್ಕಿ ಹೊಡೆದು ಮೃತಪಟ್ಟಿದ್ದರು.

Leave a Reply

Your email address will not be published. Required fields are marked *

error: Content is protected !!