ಹುಣಸೂರು: ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದ ರೈತ, ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹರೀನಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಹನಗೋಡು ಹೋಬಳಿಯ ಹರೀನಹಳ್ಳಿ ಗ್ರಾಮದ ಕುಮಾರಸ್ವಾಮಿ (55) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

