ಮಂಗಳೂರು: ಯಕ್ಷಗಾನ ವೇಷ ಹಾಕಿ ಭಿಕ್ಷಾಟನೆ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು: ಕರಾವಳಿಯಲ್ಲಿ ಹಬ್ಬಗಳ ಸೀಸನ್ ಪ್ರಾರಂಭವಾಗಿದ್ದು, ಇದೀಗ ನವರಾತ್ರಿ ಹಾಗೂ ದೀಪಾವಳಿ ಸಂದರ್ಭ ವಿವಿಧ ವೇಷ ಧರಿಸಿ ಭಿಕ್ಷಾಟನೆ ಮಾಡಲು ಪ್ರಾರಂಭಿಸುತ್ತಾರೆ. ಇತ್ತೀಚೆಗೆ ಬಾಡಿಗೆ ಸಿಗುವ ಯಕ್ಷಗಾನ ವೇಷಧರಿಸಿ ಭಿಕ್ಷಾಟನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನಸೆ ಈ ರೀತಿಯಾಗಿ ಯಕ್ಷಗಾನದವೇಷಭೂಷಣತೊಟ್ಟು, ಭಿಕ್ಷಾಟನೆಗೈದು ಯಕ್ಷಗಾನ ಕಲೆಗೆ ಅಪಚಾರವೆಸಗಲಾಗುತ್ತಿದ್ದು, ಈ ದಂಧೆ ನಿಷೇಧಿಸುವಂತೆ ಆಗ್ರಹಿಸಿ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದೆ.


