December 15, 2025

ಅಂಗಡಿಯ ಮುಂದೆ ಕಾರ್ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

0
image_editor_output_image-1291843533-1724963497650.jpg

ಬೆಂಗಳೂರು: ಅಂಗಡಿಯ ಮುಂದೆ ಕಾರ್ ಪಾರ್ಕಿಂಗ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವುದು ನಗರದ ಹೊರವಲಯದ ಸೊಂಡೆಕುಪ್ಪ ಗ್ರಾಮ ಪಂಚಾಯಿತಿ ಬಳಿ ನಡೆದಿದೆ.

ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ರೆಹಮಾನ್ (17) ಕೊಲೆಯಾದ ಯುವಕ. ಅದೇ ಗ್ರಾಮದ ರೇಣುಕಾ ಹಾಗೂ ಪರ್ಮಿ ಎಂಬವರು ರೆಹಮಾನ್ ಎದೆಗೆ ಚಾಕು ಇರಿದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗದೆ. ಕೊಲೆಯಾದ ಯುವಕ ಹುಟ್ಟು ಹಬ್ಬಕ್ಕೆಂದು ಮಂಗಳವಾರ ಕೇಕ್ ತರಲು ಬೇಕರಿ ಬಳಿ ಹೋಗಿದ್ದ. ಈ ವೇಳೆ ಆರೋಪಿಗಳು ಅಂಗಡಿ ಮುಂದೆ ಕಾರು ಪಾರ್ಕಿಂಗ್ ಮಾಡಿದ್ದು, ಇದನ್ನು ರೆಹಮಾನ್ ಪ್ರಶ್ನೆ ಮಾಡಿದ್ದ ಇದೇ ವಿಚಾರಕ್ಕೆ ಕಾರಿನಲ್ಲಿದ್ದವರು ಯುವಕನ ಮೇಲೆ ಗಲಾಟೆ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!