ಯುವಕ ನಾಪತ್ತೆ: ನದಿಯ ಬಳಿ ಬೈಕ್ ಪತ್ತೆ
ತೀರ್ಥಹಳ್ಳಿ: ತೀರ್ಥಹಳ್ಳಿ ಸಮೀಪದ ಇಂದಾವರ ಗ್ರಾಮದ ಜಯದೀಪ್ ( 24 ) ಎಂಬ ಯುವಕ ನಾಪತ್ತೆಯಾಗಿದ್ದಾನೆ.
ಯುವಕ ನಾಪತ್ತೆಯ ಮೊದಲು ಸ್ಟೇಟಸ್ ಹಾಕಿರುವುದು ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ತುಂಗಾ ನದಿಯ ಬಳಿಯ ಯುವಕನ ಬೈಕ್ ಪತ್ತೆಯಾಗಿದೆ.
ಸ್ಥಳದಲ್ಲಿ ಅಗ್ನಿಶಾಮಾಕ ತಂಡ ಹುಡುಕಾಟ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




