December 18, 2025

ಬೆಳ್ತಂಗಡಿ: ಸ್ಥಳೀಯರಿಗೆ ಕಾಣಿಸಿಕೊಂಡಿದ್ದ ಚಿರತೆ ಬೋನಿಗೆ

0
image_editor_output_image1904236009-1725179428352.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ಸ್ಥಳೀಯರಿಗೆ ಆತಂಕ ಸೃಷ್ಟಿ ಮಾಡಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ಎರಡು ತಿಂಗಳ ಹಿಂದೆ ಚಿರತೆ ಸ್ಥಳೀಯರಿಗೆ ಕಾಣಿಸಿಕೊಂಡಿದ್ದು ಭಯವನ್ನು ಸೃಷ್ಟಿಮಾಡಿತ್ತು. ಇದೀಗ ಈ ಚಿರತೆ ಬೋನಿಗೆ ಬಿದ್ದಿದ್ದು ಜನರ ಆತಂಕ ದೂರವಾಗಿದೆ.

ಊರಿನಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು ಈ ಕುರಿತು ಇಲಾಖಾ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದ್ದಾರೆ. ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!