December 18, 2025

SSLC ವಿದ್ಯಾರ್ಥಿನಿ ವಸತಿ ಶಾಲೆಯಲ್ಲಿ ನೇಣುಬಿಗಿದು ಆತ್ಮಹತ್ಯೆ

0
image_editor_output_image-533486259-1725425167432.jpg

ಹಾವೇರಿ : SSLC ವಿದ್ಯಾರ್ಥಿನಿಯೋರ್ವಳು ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಆತ್ಮಹತ್ಯೆ ಮಾಡಿಕೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯಾಗಿದ್ದಾಳೆ. ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ.

ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿದ್ಯಾರ್ಥಿನಿ ರೇಖಾ ಕಳೆದ ವಾರ ಮನೆಗೆ ಹೋಗಿದ್ದಳು. ಒಂದು ವಾರ ರಜೆ ಮುಗಿಸಿ ಗುರುವಾರ ಶಾಲೆಗೆ ಬಂದಿದ್ದಳು. ಮನೆಯಿಂದ ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ ಎಲ್ಲರ ಜೊತೆಗೆ ಎಂದಿನಂತೆ ಓಡಾಡಿಕೊಂಡು ಓದಿಕೊಂಡು ಚೆನ್ನಾಗಿದ್ದಳು. ಸೋಮವಾರ ಬೆಳಿಗ್ಗೆ ಇನ್ನುಳಿದ ವಿದ್ಯಾರ್ಥಿನಿಯರು ತಿಂಡಿ ತಿನ್ನಲು ಹೋಗಿದ್ದರು. ಇದೆ ವೇಳೆ ತಿಂಡಿ ತಿನ್ನಲು ಹೋಗದೆ ಕೊಠಡಿಯಲ್ಲೆ ರೇಖಾ ಉಳಿದುಕೊಂಡಿದ್ದಳು.

Leave a Reply

Your email address will not be published. Required fields are marked *

You may have missed

error: Content is protected !!