ರಸ್ತೆ ಬದಿಯ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ: ಇಬ್ಬರು ಸ್ಥಳದಲ್ಲೇ ಮೃತ್ಯು
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಬೆಳಗ್ಗೆ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಹೋಟೆಲ್ ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಮೃತರನ್ನು ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ನಿವಾಸಿ ಶಿವಾನಂದ, ಕೋಲಾರ ಜಿಲ್ಲೆಯ ವೆಲಗಲಬುರೆ ಗ್ರಾಮದ ನಿವಾಸಿ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಮೃತರಿಬ್ಬರು ಹೋಟೆಲ್ ಕಾರ್ಮಿಕರು ಎಂದು ತಿಳಿದು ಬಂದಿದೆ.




