September 20, 2024

ಕೊಡಂಗಾಯಿ: ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಪಾದರಕ್ಷೆ ವಿತರಣೆ

0

ವಿಟ್ಲ: ಕರ್ನಾಟಕ ರಾಜ್ಯ ಸರ್ಕಾರದ ಯಶಸ್ವಿ ಯೋಜನೆಗಳಲ್ಲಿ ಒಂದಾದ ಸರಕಾರಿ ಶಾಲಾ ಮಕ್ಕಳಿಗೆ ನೀಡಿದಂತಹ “ಉಚಿತ ಪಾದರಕ್ಷೆ”ಯ ವಿತರಣೆ ಕಾರ್ಯಕ್ರಮ‌ ದಿನಾಂಕ 06 ಸೆಪ್ಟೆಂಬರ್ 2024 ರಂದು ಕೊಡಂಗಾಯಿ ದ.ಕ.ಜಿ.ಪಂ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಜ:ಹಮೀದ್ ಮೂರ್ಜೆಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸದಸ್ಯೆ ರೇಖಾ, ಶಿಕ್ಷಣ ತಜ್ಞ ಶ್ರೀ ವಲ್ಲಬ್ಬ ತಂತ್ರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜ:ಅಬ್ದುಲ್ ಮಜೀದ್ ಟಿ ಎಂ ಕೊಡಂಗಾಯಿ, ಶಿಕ್ಷಕಿಯರು ಹಾಗೂ ಮಕ್ಕಳ ಪೋಷಕರು ಉಪಸ್ಥಿತಿತರಿದ್ದರು.

ಮುಖ್ಯ ಶಿಕ್ಷಕಿ ಲೋಲಾಕ್ಷಿ ಇವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ವಾಣಿಶ್ರೀ ಅವರು ಧನ್ಯವಾದಾರ್ಪಣೆಗೈದರು.

Leave a Reply

Your email address will not be published. Required fields are marked *

error: Content is protected !!