December 19, 2025

ಉಳ್ಳಾಲ: ಫ್ಯಾನಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

0
image_editor_output_image1125529929-1726219864307.jpg

ಉಳ್ಳಾಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ತಾರಿಪಡ್ಡು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಎಲೆಕ್ನಿಶಿಯನ್ ಆಗಿದ್ದ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಉಳ್ಳಾಲ ಪೋಲಿಸರು ಭೇಟಿ ದಾಖಲಿಸಿಕೊಂಡಿದ್ದಾರೆ. ಪ್ರಕರಣ

Leave a Reply

Your email address will not be published. Required fields are marked *

You may have missed

error: Content is protected !!