ಕರ್ತವ್ಯಲೋಪ: ಕೋಟ ಪೊಲೀಸ್ ಠಾಣಾ ಎಸ್ಐ ಅಮಾನತು
ಉಡುಪಿ: ಉಡುಪಿಯಲ್ಲಿ ಪೊಲೀಸರ ಅಮಾನತು ಪರ್ವ ಮುಂದುವರೆದಿದೆ. ಜಿಲ್ಲೆಯ ಕೋಟ ಪೊಲೀಸ್ ಠಾಣಾ ಎಸ್ ಐ ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ . ಕೆ ಆದೇಶಿಸಿದ್ದಾರೆ.
ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು, ಅಮಾನತು ಆದೇಶ ಹೊರಡಿಸಿದ್ದಾರೆ. ಉಡುಪಿಗೆ ಡಾ. ಅರುಣ್ ಅವರು ವರಿಷ್ಠಾಧಿಕಾರಿಯಾದ ನಂತರ ಇಲಾಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಸತತ ಅಮಾನತು ಮಾಡಲಾಗುತ್ತಿದೆ. ಈಗಾಗಲೇ 4 ಮಂದಿ ಎಸ್ಐಗಳು ಸಹಿತ 80 ಕ್ಕೂ ಅಧಿಕ ಸಿಬ್ಬಂದಿ ಅಮಾನತುಗೊಂಡಿದ್ದಾರೆ.
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್ಐಗಳಾದ ಗುರುನಾಥ ಹಾದಿಮನೆ, ಶಂಭುಲಿಂಗ, ಅಶೋಕ್ , ಸುಷ್ಮಾ ಅಮಾನತು ಮಾಡಲಾಗಿದ್ದು, ಈ ಪೈಕಿ ಕೆಲವು ಮಂದಿಯ ಅಮಾನತು ಆದೇಶ ಮುಕ್ತಾಯಗೊಂಡಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.





