December 16, 2025

ಗಣೇಶ ವಿಸರ್ಜನೆಗೆಂದು ಇಳಿದಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವು

0
image_editor_output_image-1421698163-1726407591616.jpg

ತುಮಕೂರು: ಗಣೇಶ ವಿಸರ್ಜನೆಗೆಂದು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತುರುವೆಕೆರೆ ) ತಾಲೂಕಿನ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ.

ರೇವಣ್ಣ (50), ರೇವಣ್ಣ ಪುತ್ರ ಶರತ್ (20) ಹಾಗೂ ದಯಾನಂದ್ (28) ಮೃತ ದುರ್ದೈವಿಗಳು. ಮೃತ ದಯಾನಂದ್‌ಗೆ ಇತ್ತೀಚೆಗೆ ಮದುವೆ ಆಗಿತ್ತು. ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಘಟನೆ ನಡೆದಿದೆ. ಇಂದು (ಭಾನುವಾರ) ಗ್ರಾಮದಲ್ಲಿ ಇಟ್ಟಿದ್ದ ಗಣೇಶನ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮುನೇಶ್ವರಸ್ವಾಮಿ

Leave a Reply

Your email address will not be published. Required fields are marked *

error: Content is protected !!