September 19, 2024

ಬೈಕ್, 3 ಲಕ್ಷ ರೂ. ವರದಕ್ಷಿಣೆ ನೀಡದಲ್ಲೆ ಕೋಪ: ಪತ್ನಿಯನ್ನು ಕೊಲೆಗೈದ ಪತಿ

0

ಲಕ್ನೋ: ಬೈಕ್ ಮತ್ತು 3 ಲಕ್ಷ ರೂ. ವರದಕ್ಷಿಣೆ ನೀಡಿಲ್ಲ ಎಂದು ತವರು ಮನೆಗೆ ಹೋಗಿದ್ದ ಪತ್ನಿಯನ್ನು ಪತಿ ಮನೆಗೆ ಕರೆದುಕೊಂಡು ಬಂದು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.

ಬೈಖೇಡ ಗ್ರಾಮದ ಸುಂದರ್ ಎಂಬಾತ ಎರಡು ವರ್ಷಗಳ ಹಿಂದೆ ಮೀನಾ ಎಂಬಾಕೆಯನ್ನು ಮದುವೆಯಾಗಿದ್ದ. ಅಂದಿನಿಂದ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಕಳೆದ ಒಂದು ತಿಂಗಳಿಂದ ಮೀನಾ ಸೋಹರ್ಕಾದಲ್ಲಿರುವ ತನ್ನ ತಂದೆಯ ಮನೆಯಲ್ಲಿಯೇ ಸೇರಿದ್ದಳು. ಸುಂದರ್ ಪ್ರತಿದಿನ ಅವಳನ್ನು ಭೇಟಿಯಾಗುತ್ತಿದ್ದ. ಅದರಂತೆ ಭಾನುವಾರ ರಾತ್ರಿಯೂ ಆಕೆಯನ್ನು ಭೇಟಿ ಮಾಡಿ ಬಳಿಕ ತನ್ನ ಮನೆಗೆ ಕರೆತಂದು ಹತ್ಯೆಗೈದಿದ್ದಾನೆ.

Leave a Reply

Your email address will not be published. Required fields are marked *

error: Content is protected !!