ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು
ರಾಮನಗರ: ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲೇ ಐವರು ಸಾವನ್ನಪ್ಪಿದ ಘಟನೆ ಮಾಗಡಿ ಬಳಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಂಗಳವಾರ (ಸೆ.17) ನಡೆದಿದೆ.
ಮಾಗಡಿ ತಾಲ್ಲೂಕಿನ ಭದ್ರಾಪುರ ಗ್ರಾಮದ ಸಮೀಪ ಘಟನೆ ನಡೆದಿದೆ. ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದಿದೆ.
ಘಟನೆಯಲ್ಲಿ ಮಾಗಡಿ ಮೂಲದ ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮೃತದೇಹ ಹೊರ ತೆಗೆದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಸ್ಥಳಕ್ಕೆ ಕುದೂರು ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.