March 22, 2026

ಕಂದಕಕ್ಕೆ ಬಿದ್ದು ಕಾಡಾನೆ ಮೃತ್ಯು

0
IMG-20241004-WA0009.jpg

ಮೈಸೂರು: ಕಂದಕಕ್ಕೆ ಬಿದ್ದು ಕಾಡಾನೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ನಡೆದಿದೆ.

ಘಟನೆಯಲ್ಲಿ ಸುಮಾರು 40 ವರ್ಷದ ಗಂಡು ಆನೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ.

ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಆನೆ ಕಂದಕಗಳನ್ನು ನಿರ್ಮಾಣ ಮಾಡಲಾಗಿತ್ತು. ಆಹಾರ ಅರಸಿ ಬರುತ್ತಿದ್ದ ವೇಳೆ ಕಂದಕಕ್ಕೆ ಬಿದ್ದಿದೆ. ಕಾಡಿನಿಂದ ನಾಡಿಗೆ ಬರಲು ಯತ್ನಿಸಿರುವ ಆನೆ ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.

Leave a Reply

Your email address will not be published. Required fields are marked *

error: Content is protected !!