ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ್
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪದಡಿ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ್ದಾರೆ.
ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಹಾಗೂ ಕರ್ನಾಟಕ ಕೆಡರ್ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಚಂದ್ರಶೇಖರ್ ಅವರು ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ




