February 4, 2026

ಕಾಸರಗೋಡು: ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ಆತ್ಮಹತ್ಯೆ: ಪೊಲೀಸ್ ಸಬ್ಇನ್ಸ್ಪೆ ಕ್ಟರ್ ಅನೂಪ್ ಅಮಾನತು

0
image_editor_output_image1154425913-1728680039905.jpg

ಕಾಸರಗೋಡು: ನಗರದ ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ರವರ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಆರೋಪಕ್ಕೆ ಒಳಗಾದ ಚಂದೇರ ಠಾಣಾ ಸಬ್ ಇನ್ಸ್ ಪೆಕ್ಟರ್ ಪಿ. ಅನೂಪ್ ನನ್ನು ಅಮಾನತು ಗೊಳಿಸಲಾಗಿದೆ.

ಕಾಸರಗೋಡು ನಗರ ಠಾಣಾ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಪಿ. ಅನೂಪ್ ನನ್ನು ಆರೋಪದ ಹಿನ್ನಲೆಯಲ್ಲಿ ಚಂದೇರ ಠಾಣೆಗೆ ವರ್ಗಾಯಿಸಲಾಗಿತ್ತು. ಸೋಮವಾರ ದಂದು ಅಬ್ದುಲ್ ಸತ್ತಾರ್ ರೈಲ್ವೆ ನಿಲ್ದಾಣ ಸಮೀಪದ ಕ್ವಾಟರ್ಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ನಗರದ ರಸ್ತೆ ಯೊಂದರಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ದರೆಂಬ ಕಾರಣಕ್ಕೆ ಅಬ್ದುಲ್ ಸತ್ತಾರ್ ರವರ ಆಟೋ ರಿಕ್ಷಾವನ್ನು ಕಸ್ಟಡಿಗೆ ತೆಗೆದು ಕೊಂಡಿದ್ದರು. ಹಲವು ಬಾರಿ ಠಾಣೆಯ ಮೆಟ್ಟಲೇರಿದ್ದರೂ ಆಟೋ ರಿಕ್ಷಾ ಬಿಟ್ಟು ಕೊಡಲು ಮುಂದಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು.

ಇದಲ್ಲದೆ ಸಬ್ ಇನ್ಸ್ ಪೆಕ್ಟರ್ ಅನೂಪ್ ವಿರುದ್ಧ ಇನ್ನಿತರ ಆರೋಪಗಳು ಕೇಳಿ ಬಂದಿವೆ. ಕಾಸರಗೋಡು ನಗರದಲ್ಲಿ ಆಟೋ ಚಾಲಕನ ಜೊತೆ ಎಸ್ ಐ ಅನೂಪ್ ಅನುಚಿತವಾಗಿ ವರ್ತಿಸುವ ವಿಡಿಯೋ ಹೊರಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಆಟೋ ಚಾಲಕನನ್ನು ಠಾಣೆಗೆ ಕಾಲರ್ ಹಿಡಿದು ಕಸ್ಟಡಿಗೆ ತೆಗೆದುಕೊಳ್ಳಲು ಯತ್ನಿಸುತ್ತಿರುವ ವಿಡಿಯೋ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!