ರಸ್ತೆ ಪಕ್ಕದ ಚರಂಡಿಗೆ ಬಿದ್ದು ಕೊಚ್ಚಿಹೋದ ಬಾಲಕ
ಹಾವೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ರಸ್ತೆಗಳು ಕೆರೆಯಂತಾಗಿದ್ದು, ರಸ್ತೆ ಕಾಣದೆ ಚರಂಡಿಗೆ ಬಿದ್ದು ಬಾಲಕನೊಬ್ಬ ಕೊಚ್ಚಿ ಹೋದ ಘಟನೆ ನಗರದ ಎಸ್.ಪಿ. ಕಚೇರಿ ಮುಂಭಾಗದಲ್ಲಿ ನಡೆದಿದೆ.
ನೀವೆದನ್ ಬಸವರಾಜ ಗುಡಗೇರಿ (12) ಚರಂಡಿಯಲ್ಲಿಕೊಚ್ಚಿ ಹೋದ ಬಾಲಕ.
ರಾತ್ರಿ ಸುರಿದ ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರೆಯುತ್ತಿದ್ದು, ರಸ್ತೆ ಯಾವುದು ಚರಂಡಿ ಯಾವುದು ಎಂಬದು ಗೊತ್ತಾಗಂತಾಗಿದೆ. ಬೆಳಗ್ಗೆ ಬಾಲಕ ರಸ್ತೆಯಲ್ಲಿ ಸಂಚರಿಸುವ ನೀರು ಹರಿಯುತ್ತಿದ್ದರಿಂದ ಚರಂಡಿ ಇರುವುದು ಗೊತ್ತಾಗದೆ ಚರಂಡಿ ಮೇಲೆ ಕಾಲಿಟ್ಟಾಗ ನೀರಿನಲ್ಲಿ ಕೊಚ್ಚಿಹೊಗಿದ್ದಾನೆ ಎನ್ನಲಾಗುತ್ತಿದೆ.




