ಬೆಂಗಳೂರಿನ ಲಾಡ್ಜ್ ನಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದ ಸಾವು
ಬೆಂಗಳೂರು: ನಗರ ಲಾಡ್ಜ್ ವೊಂದರಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಗ್ಗೆ ಇದೀಗ ವರದಿಯಾಗಿದೆ.
ಜಕ್ಕಣ್ಣಗೌಡರ ಮೃತ ತಹಶೀಲ್ದಾರ್ ಎಂದು ತಿಳಿದುಬಂದಿದೆ. ಜಕ್ಕಣ್ಣಗೌಡ ಅವರು ಕೋರ್ಟ್ ಕೆಲಸಕ್ಕೆಂದು ಬೆಂಗಳೂರಿಗೆ ಆಗಮಿಸಿ ಕಪಾಲಿ ಥಿಯೇಟರ್ ಸಮೀಪದ ವೈಭವ್ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಅಕ್ಟೋಬರ್ 16ರ ರಾತ್ರಿ 9ರ ಸುಮಾರಿಗೆ ಅವರು ರೂಮ್ ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.




