March 18, 2026

ಪುತ್ತೂರು: ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ: ಆಗಮಿಸಿದ ಪುತ್ತಿಲಗೆ ಕಾರ್ಯಕರ್ತರಿಂದ ವಿರೋಧ-ಮಾತಿನ ಚಕಮಕಿ

0
image_editor_output_image9393500-1729664657507

ಪುತ್ತೂರು: ವಿಶ್ವಹಿಂದೂ ಪರಿಷದ್ ನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆಗೆ ಆಗಮಿಸಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕೆಲ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.

ತನ್ನ ಬೆಂಬಲಿಗರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಕಾರಿನಿಂದ ಇಳಿಯುತ್ತಿದ್ದಂತೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೆಲವರೊಂದಿಗೆ ಮಾತಿನ ಚಕಮಕಿ ನಡೆದಿದೆ. ಒಂದು ಹಂತದಲ್ಲಿ ವಿರೋಧಿಸುವವರನ್ನು ಉದ್ದೇಶಿಸಿ ಕಾರ್ಯಕ್ರಮ ಮುಗಿಸಿಯೇ ಇಲ್ಲಿಂದ ತೆರಳುತ್ತೇನೆ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದೇ ವೇಳೆ ಪುತ್ತಿಲ ಬೆಂಬಲಿಗರ ಮತ್ತು ಪುತ್ತಿಲ ಆಗಮನವನ್ನು ವಿರೋಧಿಸಿದ ಕಾರ್ಯಕರ್ತರ ನಡುವೆ ಮಾತಿನ ಚಕಾಮಕಿ ನಡೆದಿದೆ ಎನ್ನಲಾಗಿದೆ. ವಿರೋಧದ ನಡುವೆಯೂ ಪುತ್ತಿಲ ಅವರು ಕೆಲ ಕಾಲ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!