December 15, 2025

ರಾಜ್ಯದಲ್ಲಿ ‘ಶಕ್ತಿ ಯೋಜನೆ’ ಪರಿಷ್ಕರಣೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

0
unnamed.png

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶಕ್ತಿ ಯೋಜನೆ ಪರಿಷ್ಕರಣೆ ಸರ್ಕಾರದ ಹಂತದಲ್ಲಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಕೆಲ ಮಹಿಳೆಯರು ಹೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಆ ಕಾರ್ಯಕ್ರಮದಲ್ಲಿ ನಾನು ಅಲ್ಲಿ ಇರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇನ್ನು ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವೀಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸುತ್ತಿದ್ದಾರೆ. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ 5 ರಿಂದ 10 ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ. ಶೀಘ್ರದಲ್ಲಿ ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!