ವಿಟ್ಲ: ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ವಿಟ್ಲ: ವಿಟ್ಲ ಎಜುಕೇಶನ್ ಸೊಸೈಟಿ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಹರೀಶ್ ಸಿ ಹೆಚ್ ಧ್ವಜಾರೋಹಣ ಮಾಡಿದರು.
ಈ ಕಾರ್ಯಕ್ರಮದಲ್ಲಿ ಕಳೆದ ಹತ್ತನೇ ತರಬೇತಿ ಪಬ್ಲಿಕ್ ಪರೀಕ್ಷೆ ಯಲ್ಲಿ ೧೨೫ ಕ್ಕೆ ೧೨೫ ಅಂಕ ಕಳಿಸಿದ ವಿದ್ಯಾರ್ಥಿ ಕಾರ್ತಿಕ್ ಅವರನ್ನು ಗೌರವಿಸಲಾಯಿತು. ವಿಠ್ಠಲ ಎಜುಕೇಶನ್ ಸೊಸೈಟಿ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ನಿತ್ಯಾನಂದ ನಾಯಕ್ ಮತ್ತು ಸದಾಶಿವ ಬನ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಉಪ ಪ್ರಿನ್ಸಿಪಾಲ್ ಕಿರಣ್ ಕುಮಾರ್ ಬ್ರಹ್ಮಾವರ್, ಶಂಕರನಾರಾಯಣ ಪ್ರಸಾದ್, ರಮೇಶ್ ಬಿ ಕೆ, ಮೋಹನ್, ವಾಣಿ, ಗೀತಾ, ಶ್ರೀಹರಿ ಶರ್ಮ, ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




