April 15, 2025

ಸ್ಕೂಟರ್ ನಲ್ಲಿ ಸಾಗುತ್ತಾ ಪಟಾಕಿ ಸಿಡಿಸಿ ಪುಂಡಾಟ: ಇಬ್ಬರ ಬಂಧನ

0

ಬೆಂಗಳೂರು: ಸ್ಕೂಟರ್ ನಲ್ಲಿ ಸಾಗುತ್ತಾ ಪಟಾಕಿ ಸಿಡಿಸಿ ಪುಂಡಾಟ ಪ್ರದರ್ಶಿಸಿದ ಇಬ್ಬರು ವ್ಯಕ್ತಿಗಳನ್ನು ಹೆಣ್ಣೂರು ಸಂಚಾರಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸವಾರನನ್ನು ಕಾಡುಗೊಂಡನಹಳ್ಳಿ ನಿವಾಸಿ ಎಸ್ ಆದಿತ್ಯ ಮತ್ತು ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಿವಾಸಿ ವಿ ಅಕ್ಷಯ್ ಕುಮಾರ್ (18) ಎಂದು ಗುರುತಿಸಲಾಗಿದೆ. ಆದಿತ್ಯ ಪಿಯು ವಿದ್ಯಾರ್ಥಿಯಾಗಿದ್ದರೆ, ಅಕ್ಷಯ್ ಎಂಜಿನಿಯರಿಂಗ್ ವಿದ್ಯಾರ್ಥಿ.

ಆದಿತ್ಯ ಸ್ಕೂಟರ್ ಓಡಿಸುತ್ತಿದ್ದು, ಈ ವೇಳೆ ಹಿಂಬದಿಯಲ್ಲಿ ಕುಳಿತಿದ್ದ ಅಕ್ಷಯ್ ಪಟಾಕಿಗಳನ್ನು ಸಿಡಿಸಿ ರಸ್ತೆಗೆ ಎಸೆದು ಪುಂಡಾಟ ಪ್ರದರ್ಶಿಸಿದ್ದ.

 

 

ಇಬ್ಬರೂ ಹೆಲ್ಮೆಟ್ ಧರಿಸದೇ, ಅಡ್ಡಾದಿಡ್ಡಿಯಾಗಿ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಇಬ್ಬರು ಆರೋಪಿಗಳು ಪಟಾಕಿ ಅಂಟಿಸಿ ರಸ್ತೆಯಲ್ಲಿ ಕಂಡಕಂಡವರತ್ತ ಎಸೆಯುತ್ತ ಸಾಗುತ್ತಿದ್ದು, ಕಿಡಿಗೇಡಿಗಳ ಪುಂಡಾಟವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!