December 15, 2025

ಶಿರಾಡಿಘಾಟ್‌: ಪ್ರಪಾತಕ್ಕೆ ಉರುಳಿ ಬಿದ್ದ ಕ್ಯಾಂಟರ್

0
image_editor_output_image1570743911-1730804962497.jpg

ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ನಲ್ಲಿ ಕ್ಯಾಂಟರ್ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಮಂಗಳವಾರದಂದು ಕ್ಯಾಂಟರ್ ಮೇಲೆತ್ತುವ ಕೆಲಸ ಆರಂಭಿಸಲಾಗಿದೆ.

ಕ್ರೇನ್‌ ಮೂಲಕ ಕ್ಯಾಂಟರ್ ಮೇಲೆತ್ತುವ ಕೆಲಸದಿಂದಾಗಿ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟ್ರಾಫಿಕ್ ಜಾಮ್‌ ಅದ್ಯಾವ ರೀತಿ ಆಗಿದೆ ಅಂದ್ರೆ ಸುಮಾರು 10 ಕಿಲೋ ಮೀಟರ್ ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದೆ.

ಕೆಲ ಲಘು ವಾಹನ ಚಾಲಕರು ಘಾಟ್‌ನಲ್ಲಿ ತಿರುವು ಪಡೆದುಕೊಂಡು ಬಿಸಲೆ ಘಾಟ್‌ ಮೂಲಕ ಸಂಚಾರ ಬೆಳೆಸುವ ಪ್ರಯತ್ನ ನಡೆಸಿದ್ದಾರೆ. ಆದ್ರೆ ಕೆಲವೊಂದು ಕಡೆ ಮುಂದೆ ಹೋಗುವ ಆತುರದಲ್ಲಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಅಲ್ಲೂ ಕೂಡಾ ಟ್ರಾಫಿಕ್ ಜಾಮ್ ಉಂಟಾಗಿದೆ. ಕ್ಯಾಂಟರ್ ಮೇಲತ್ತುವ ಕಾರ್ಯ ನಡೆಯುತ್ತಿರುವ ಪ್ರದೇಶದ ಇಕ್ಕೆಲೆಗಳಲ್ಲೂ ವಾಹನ ದಟ್ಟಣೆ ಇರುವ ಕಾರಣ ತಡರಾತ್ರಿಯಾದರೂ ಸುಲಲಿತ ಸಂಚಾರ ಅನುಮಾನವಾಗಿದೆ.

Leave a Reply

Your email address will not be published. Required fields are marked *

error: Content is protected !!