ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವು
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
8ನೇ ತರಗತಿಯಲ್ಲಿ ಓದುತ್ತಿದ್ದ ಅಭಿಲಾಷ್(13) ಮೃತ ವಿದ್ಯಾರ್ಥಿ. ಸದ್ಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ವಸತಿ ಶಾಲೆ ಪ್ರಿನ್ಸಿಪಾಲ್, ವಾರ್ಡನ್ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವುದಾಗಿ ಆರೋಪಿಸಲಾಗಿದೆ. ಮೃತ ವಿದ್ಯಾರ್ಥಿ ಅಭಿಲಾಷ್, ಶಕುನಿ ತಿಮ್ಮನಹಳ್ಳಿಯ ನಿವಾಸಿ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




