December 15, 2025

ಮಡಿಕೇರಿ: ಕಾಫಿ ತೋಟದಲ್ಲಿ ಅರೆಸುಟ್ಟ ಮೃತದೇಹದ ಪ್ರಕರಣ, ಆರೋಪಿಯ ಬಂಧನ

0
image_editor_output_image-1265367329-1730971176692.jpg

ಮಡಿಕೇರಿ: ಕೊಡಗು ಜಿಲ್ಲೆಯ ಸುಂಟಿಕೊಪ್ಪ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ದೊರೆತ ಅರೆಸುಟ್ಟ ಮೃತದೇಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪದಡಿ ತನಿಖೆ ಎದುರಿಸಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಹರಿಯಾಣ ರಾಜ್ಯದ ಕಾರ್ನಲ್‌ ಗರುಂದ ನಿವಾಸಿ ಅಂಕೂರ್‌ ರಾಣ(30) ಎಂಬಾತನನ್ನು ಕೊಡಗು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತೆಲಾಂಗಣ ರಾಜ್ಯದಲ್ಲಿ ಸ್ಥಳ ಮಹಜರು ಮಾಡಲು ತೆರಳಿದ ಸಂದರ್ಭ ಮೂವರು ಆರೋಪಿಗಳಲ್ಲಿ ಅಂಕೂರ್‌ ರಾಣ ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಸತತ 6 ದಿನಗಳಿಂದ ಕಾರ್ಯಾಚರಣೆ ನಡೆಸಿ ರಾಜಸ್ಥಾನದ ಕೋಟಾ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!