March 18, 2026

ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಕನ್ನಡ ರಾಜ್ಯೋತ್ಸವ-ಸ್ವಚ್ಛತಾ ಕಾರ್ಯಕ್ರಮ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ: ಕನ್ನಡ ನಾಡಿನ ಸಾಧಕರಿಗೆ ಸನ್ಮಾನ

0
image_editor_output_image-563228166-1731233213938

ಮಂಗಳೂರು: ಪಡೀಲ್ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ, ನಮ್ಮ ನಗರ ಸ್ವಚ್ಚ ನಗರ ಅಭಿಯಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ  ಭಾನುವಾರ ಜನಪ್ರಿಯ ಆಸ್ಪತ್ರೆಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಾಧಕರಾದ ನಜೀರ್ ಬೆಂಗ್ರೆ ಮತ್ತು  ಜಾರ್ಜ್ ಪಿವಿ ಅವರನ್ನು ಸನ್ಮಾನಿಸಲಾಯಿತು. ಪಡೀಲ್ ಸುತ್ತಮುತ್ತಲಿನಲ್ಲಿ ಡಾ. ಅಬ್ದುಲ್ ಬಶೀರ್ ವಿ.ಕೆ ಅವರ ನೇತೃತ್ವದಲ್ಲಿ ಹೆದ್ದಾರಿಯಲ್ಲಿ ಕಸ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು.

ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ. ಅಬ್ದುಲ್ ಬಶೀರ್ ವಿ.ಕೆ ಮಾತನಾಡಿ, ಕನ್ನಡ ನಾಡಿನಲ್ಲಿ ಎಲ್ಲವೂ ನಮಗೆ ದೊರೆತಿದ್ದು, ಕನ್ನಡದ ಬಗ್ಗೆ ಹೆಮ್ಮೆಯಾಗುತ್ತಿದೆ. ಕನ್ನಡ ನಾಡಿನಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ. ಹಾಸನದಲ್ಲಿ ಹಲವು ವರ್ಷಗಳಿಂದ ಕನ್ನಡ ಉಳಿಸಲು ಬೆಳೆಸಲು ಇದೇ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದೀಗ ಮಂಗಳೂರಿನಲ್ಲಿ ಮೊದಲ ಬಾರೀ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಕಾರ್ಪೋಟರ್ ಚಂದ್ರವತಿ ಮಾತನಾಡಿ, ಆರೋಗ್ಯ ಸ್ಚಚ್ಛವಾಗಬೇಕಾದರೆ ಪರಿಸರ ಸ್ವಚ್ಚವಾಗಿಡಬೇಕು. ಹಾಸನದಲ್ಲಿ ಬಶೀರ್ ಅವರ ಸೇವೆ ಶ್ಲಾಘನೀಯ. ಇದೀಗ ಮಂಗಳೂರಿನಲ್ಲಿ ಇನ್ನಷ್ಟು ಸೇವೆ ನೀಡಲು ದೇವರು ಅನುಗ್ರಹಿಸಲಿ ಎಂದು ಶುಭ ಹಾರೈಸಿದರು.

ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿ, ಹಾಸನದಲ್ಲಿ ಜನರ ಜನಮನ ಗೆದ್ದ ಬಶೀರ್ ಅವರು ನಮ್ಮ ಜಿಲ್ಲೆಯ ಜನಮನ ಗೆದ್ದಿದ್ದಾರೆ. ಸ್ವಚ್ಚತೆ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾನ ಸಾಧ್ಯ ಎಂದರು.

ಎಂ ಫ್ರೆಂಡ್ಸ್ ಸುಜಾ ಮಹಮ್ಮದ್, ಸಂತೋಷ್ ಶೆಟ್ಟಿ, ಸುರೇಶ್ ಆಚಾರ್, ದೇವಿಪ್ರಸಾದ್, ಶಾಕೀರ್ ಅಳಕೆಮಜಲು, ಅಬ್ದುಲ್ ಜಬ್ಬಾರ್ ಮಾರಿಪಳ್ಳ, ಮಹಮ್ಮದ್ ಶಾಕೀರ್, ಆರೀಫ್ ಪಡುಬಿದ್ರೆ, ಉಮ್ಮರ್ ಫಾರೂಕ್, ನಾಸೀರ್ ಕಂಬಳಬೆಟ್ಟು, ಮಹಮ್ಮದ್ ಕಂಬಳಬೆಟ್ಟು, ಗಫೂರ್ ಕಂಬಳಬೆಟ್ಟು ಉಪಸ್ಥಿತರಿದ್ದರು.
ಜನಪ್ರಿಯ ಆಸ್ಪತ್ರೆಯ ಸಿಇಓ ಡಾ. ಕಿರಾಶ್ ಪರ್ತಿಪ್ಪಾಡಿ ನಿರೂಪಿಸಿದರು. ಡಾ.ನೂಮನ್, ನೌಶಿನ್ ಬದ್ರಿಯಾ ಸಹಕರಿಸಿದರು.‌

ಪುಟ್ಟಣ ಕುಲಾಲ್ ಪ್ರತಿಷ್ಠಾನ, ಎಂ ಫ್ರೆಂಡ್ಸ್ ಮಂಗಳೂರು, ಶಿವ ಫ್ರೆಂಡ್ಸ್ ಕ್ಲಬ್, ಎಸ್ ವೈ ಎಸ್ ಇಸಾಬ ದ.ಕ, ಹಿದಾಯ ಫೌಂಡೇಶನ್ ಮಂಗಳೂರು, ಕನ್ನಡ ಕಟ್ಟೆ ಮಂಗಳೂರು, ಎಸ್ಕೆಎಸ್ ಎಸ್ ಎಫ್ ವಿಖಾಯ, ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್, ಮಸೂದ್ ಕಾಲೇಜ್ ಆಫ್ ನರ್ಸಿಂಗ್ ಮಂಗಳೂರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿತ್ತು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಧುಮೇಹ, ರಕ್ತದ ಒತ್ತಡ ಪರೀಕ್ಷೆ, ಶಸ್ತ್ರ ಚಿಕಿತ್ಸ ವೈದ್ಯರು, ಕಿಡ್ನಿ ಮತ್ತು ಮೂತ್ರಕೋಶ ತಙ್ಞರು, ಕೀಲು ಮೂಳೆ ಮತ್ತು ಬೆನ್ನು ಮೂಳೆ ಶಸ್ತ್ರ ಚಿಕಿತ್ಸ ತಜ್ಞರು, ಕಿವಿ, ಮೂಗು, ಗಂಟಲು ತಜ್ಞರು, ಪ್ರಸೂತಿ ಸ್ತ್ರೀರೋಗ, ಮಕ್ಕಳ ಮತ್ತು ಕಾಸ್ಮೆಟಿಕ್ ಶಸ್ತ್ರ ಚಿಕಿತ್ಸಾ ತಜ್ಞರು ಭಾಗವಹಿಸಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಂಡರು.

Leave a Reply

Your email address will not be published. Required fields are marked *

error: Content is protected !!