ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ: ಹೊತ್ತಿ ಉರಿದ ಬಸ್
ಕಾರವಾರ: ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ ಪರಿಣಾಮ ಬಸ್ ಸಂಪೂರ್ಣ ಹೊತ್ತಿ ಉರಿದ ಘಟನೆ ಉ.ಕ ಜಿಲ್ಲೆಯ ಯಲ್ಲಾಪುರದ ಜೋಡು ಕೆರೆ ಬಳಿ ನಡೆದಿದೆ.
ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ನಲ್ಲಿ ಸುಮಾರು 22 ಮಂದಿ ಪ್ರಯಾಣಿಸುತ್ತಿದ್ದು, ಈ ವೇಳ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.