December 19, 2025

ಹನುಮಾನ್‌ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ: ಶ್ರೀರಂಗಪಟ್ಟಣದಲ್ಲಿ ಪೊಲೀಸರು ಕಟ್ಟೆಚ್ಚರ, ಜಾಮೀಯಾ ಮಸೀದಿಗೆ ಭದ್ರತೆ

0
image_editor_output_image1928491827-1639655257739.jpg

ಮಂಡ್ಯ: ಹನುಮಾನ್‌ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಅಂಗವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ಧಾರೆ. ಗಂಜಾಂನಿಂದ ಆರಂಭಗೊಳ್ಳಲಿರುವ ಮಾಲಾಧಾರಿಗಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿ ರಂಗನಾಥ ಸ್ವಾಮಿ ದೇವಾಲಯ ತಲುಪಲಿದೆ.

ಮಸೀದಿಗೆ ಭದ್ರತೆ:
ಸಂಕೀರ್ತನಾ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಜಾಮೀಯಾ ಮಸೀದಿ ಮೇಲೆ ದಾಳಿ ನಡೆಸಲಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಳೆದೊಂದು ವಾರದಿಂದ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಮಸೀದಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಮಸೀದಿ ಪ್ರವೇಶಿಸುವ ಎಲ್ಲಾ ರಸ್ತೆಗಳನ್ನು ಬಂದ್‌ ಮಾಡಲಾಗಿದೆ.

ಹಿಂದೂ ಜಾಗರಣ ವೇದಿಕೆ ವತಿಯಿಂದ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು ಪಟ್ಟಣದಾದ್ಯಂತ ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ರಾಜ್ಯದ ವಿವಿಧೆಡೆಯಿಂದ ಬಂದಿರುವ ಸಾವಿರಾರು ಹನುಮಾನ್‌ ಮಾಲಾಧಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!