February 4, 2026

ಕೆಲಸ‌ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಢಿಕ್ಕಿ: ಬೈಕ್ ಸವಾರ ಸಾವು

0
image_editor_output_image804277000-1731874720595.jpg

ಹಾಸನ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬಾಹ್ಯಾಕಾಶ ಮುಖ್ಯ ನಿಯಂತ್ರಣ ಸೌಲಭ್ಯ ಕೇಂದ್ರದ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಹಾಸನದ ಜಯನಗರ ಸರ್ಕಲ್‌ನಲ್ಲಿ ನಡೆದಿದೆ.

ಮೃತರನ್ನು ಅರವಿಂದ್ (51) ಎಂದು ಗುರುತಿಸಲಾಗಿದೆ. ಅವರು MCFನಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕೆಲಸ ಮುಗಿಸಿ ಸ್ಕೂಟಿಯಲ್ಲಿ ಹಾಸನ ನಗರಕ್ಕೆ ಬಂದಿದ್ದರು. ವಾಪಾಸ್ ಮನೆಗೆ ತೆರಳುವಾಗ ಅಪಘಾತ ನಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತ ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!