ಸರಳಬೆಟ್ಟು ಬಾಲಮಿತ್ರ ಯಕ್ಷಗಾನ ಕಲಾವಿದ ನಿಧನ
ಮಣಿಪಾಲ: ಮಣಿಪಾಲ ಸರಳಬೆಟ್ಟು ಬಾಲಮಿತ್ರ ಯಕ್ಷಗಾನ ಮಂಡಳಿಯ ಸಂಚಾಲಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ರಾದ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನರಾಗಿದ್ದಾರೆ.
ಅವರಿಗೆ 59 ವಯಸ್ಸು. ಮಣಿಪಾಲದ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ಇಂದು ಅಸುನೀಗಿದ್ದಾರೆ.
ಯಕ್ಷಗಾನ ಕಲೆಯನ್ನು ವಿದ್ಯಾರ್ಥಿಗಳಲ್ಲಿ ಬಾಲ ಪ್ರತಿಭೆಗಳನ್ನುರೂಪಿಸಿವಲ್ಲಿ ಬಾಲ ಮಿತ್ರ ಯಕ್ಷಗಾನ ಮಂಡಳಿ ಮಣಿಪಾಲದ ಸರಳ ಬೆಟ್ಟು ವಿನಲ್ಲಿ ಸ್ಥಾಪಿಸಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಸೌತ್ ಆಫ್ರಿಕಾ, ದುಬೈ, ಮೊದಲಾದ ದೇಶಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ್ದರು . ದೆಹಲಿ, ಮುಂಬೈ ,ಬೆಂಗಳೂರು, ಮೊದಲಾದ ಕಡೆಯಲ್ಲಿಯೂ ಮಕ್ಕಳ ಯಕ್ಷಗಾನದ ಪ್ರದರ್ಶನ ನೀಡಿದ್ದರು.




