May 11, 2026

ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂದು ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ: ಆರೋಪಿಯ ಬಂಧನ

0
image_editor_output_image1817816118-1732265393509.jpg

ರಾಯಚೂರು: ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂದು ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಿಯನ್ನು ಹಟ್ಟಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಲಿಂಗಸುಗೂರಿನ ಗೋಲಪಲ್ಲಿಯ ತಿಮ್ಮಣ್ಣ ಎಂದು ಗುರುತಿಸಲಾಗಿದೆ. ಗ್ರಾಮದ ಬಳಿ ನ.19ರ ಬೆಳಗಿನ ಜಾವ 2ರ ವೇಳೆ ಆರೋಪಿ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ. ಕಲ್ಲು ತೂರಾಟದಲ್ಲಿ ಮೂರು ಸಾರಿಗೆ ಬಸ್, ಕಾರು ಹಾಗೂ ಲಾರಿಗಳ ಗಾಜುಗಳು ಒಡೆದು ಹೋಗಿದ್ದವು. ಅಲ್ಲದೇ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.

ಈ ಘಟನೆ ಪೊಲೀಸರಿಗೆ ತಲೆನೋವಾಗಿತ್ತು. ಕಳ್ಳತನ ಮಾಡಲು ವಾಹನಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂದು ಶಂಕಿಸಲಾಗಿತ್ತು. ಆರೋಪಿಗಳು ಕುಡಿದ ಮತ್ತಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!