ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲಿಗೆ ತಂದೆ, ಮಗ ಕಾರಣ:
ವಿಜಯಪುರ: ಬಿಜೆಪಿಯ ಈ ಸೋಲಿನ ಕುರಿತು ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ” ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
‘ವಿಜಯೇಂದ್ರ ನೇತೃತ್ವವನ್ನು ರಾಜ್ಯದ ಜನ ಒಪ್ಪಿಲ್ಲ. ಈ ವಿಚಾರ ವಿಜಯೇಂದ್ರಗೂ ಗೊತ್ತು. ಬಿಜೆಪಿಯ ಹೀನಾಯ ಸೋಲಿಗೆ ಅವರೇ ಕಾರಣ. ಇದನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಆದರೆ ಇದೆಲ್ಲವೂ ಒಳಒಪ್ಪಂದದಿಂದ ಬಿಜೆಪಿಗೆ ಇಂತಹ ಪರಿಸ್ಥಿತಿ ಬಂದಿದೆ ಎಂದು ಹೇಳಿದರು




