March 18, 2026

ಮಂಗಳೂರು: ಕುಖ್ಯಾತ ರೌಡಿಶೀಟರ್ ಬಂಧನ

0
image_editor_output_image1542621964-1732360383399.jpg

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.

ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.

ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .

Leave a Reply

Your email address will not be published. Required fields are marked *

error: Content is protected !!