ಉಪಚುನಾವಣಾ ಫಲಿತಾಂಶ ಕಂಡು ಟಿವಿ ಒಡೆದು ಹಾಕಿದ ಬಿಜೆಪಿ ಕಾರ್ಯಕರ್ತ
ವಿಜಯಪುರ: ಉಪಚುನಾವಣಾ ಫಲಿತಾಂಶ ಕಂಡು ಟಿವಿ ಒಡೆದು ಹಾಕಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದಲ್ಲಿ ನಡೆದಿದೆ.
ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ 3 ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಇಂದು (ನ.23) ಹೊರಬಿದ್ದಿದೆ. ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಭರ್ಜರಿಯಾಗಿ ಗೆಲುವನ್ನು ಸಾಧಿಸಿದೆ.
ಕೋಲ್ಹಾರ ಪಟ್ಟಣದ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತರಾದ ವೀರಭದ್ರಪ್ಪ ಭಾಗಿ ಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಿದ್ದರು. ಈ ವೇಳೆ ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವನ್ನು ಸಾಧಿಸಿ ಬಿಜೆಪಿ ಸೋತಿರುವುದು ಕಾರ್ಯಕರ್ತನ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಮನೆಯಲ್ಲಿದ್ದ ಟಿವಿಯನ್ನು ಎತ್ತಿಕೊಂಡು ಹೊರಕ್ಕೆ ಬಿಸಾಡಿದ್ದಾರೆ.




