March 18, 2026

ಪುತ್ತೂರು: ಕಾರ್ಮಿಕನ ಮೃತದೇಹ ಪತ್ತೆ ಪ್ರಕರಣ, ಪ್ರಮುಖ ಆರೋಪಿ ಹೆನ್ರಿ ತಾವೋ ಸಹಿತ ಮೂವರ ಬಂಧನ

0
image_editor_output_image1884032027-1732511891528.jpg

ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಓರ್ವ ಆರೋಪಿಯನ್ನು ಈ ಹಿಂದೆಯೇ ಬಂದಿಸಿದ್ದರು.

ತನ್ನೊಂದಿಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿ ಹೋದ ಘಟನೆ ನ.16ರಂದು ಸಾಲ್ಮರ ಕೆರೆಮೂಲೆಯಲ್ಲಿ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕ ಹೆನ್ರಿ ತಾವೋ ಅವರ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!