ಅಝಾನ್ ವಿರುದ್ಧ ಅಪಪ್ರಚಾರ ಮಾಡಿ ಪ್ರಚೋದನಕಾರಿ ಭಾಷಣ:
ಬಿಸ್ಮಿಲ್ಲಾ ಜುಮ್ಮಾ ಮಸ್ಜಿದ್ ವತಿಯಿಂದ ದೂರು ದಾಖಲು
ಬಂಟ್ವಾಳ: ಅಲ್ಲಾಹು ಅಕ್ಬರ್ ಎಂದರೆ ಹಿಂದೂಗಳನ್ನು ಕೊಳ್ಳಿ ಎಂದು ಸಮಾಜಕ್ಕೆ ತಪ್ಪು ಮಾಹಿತಿ ನೀಡಿ ಸಮುದಾಯಗಳ ನಡುವೆ ವೇಷಮ್ಯ ಮೂಡಿಸಲು ಪ್ರಯತ್ನಿಸಿದ ಆರೋಪದಲ್ಲಿ ಹಾರಿಕಾ ಮಂಜುನಾಥ್ ವಿರುದ್ಧ ದೂರು ನೀಡಲಾಯಿತು.
ಬೆಳ್ತಂಗಡಿಯಲ್ಲಿ ಸೋಮವಾರ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಕಿನ್ಯಮ್ಮ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗೀತಾ ಜಯಂತಿ ಸೌರ್ಯ ಪಥಸಂಚಲನ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಾರಿಕಾ ಮಂಜುನಾಥ್ ಅವರು ಮುಸ್ಲಿಮರ ಆಝನ್ (ಮಸೀದಿಯಲ್ಲಿ ಐದು ಬಾರಿ ಮೊಳಗುವ ಸಂದೇಶ) ಬಗ್ಗೆ ದುರುದ್ದೇಶಪೂರಿತವಾಗಿ ತಪ್ಪು ಮಾಹಿತಿ ವ್ಯಾಖ್ಯಾನ ನೀಡಿದ್ದರು.
ಇದರಿಂದ ಸಮಾಜಕ್ಕೆ ತಪ್ಪು ಮಾಹಿತಿ ರವಾನೆಯಾಗುತ್ತದೆ. ಎಂದು ಬಿಸ್ಮಿಲ್ಲಾ ಜುಮ್ಮಾ ಮಸೀದಿ ಆಡಳಿತ ಕಮಿಟಿ
ವತಿಯಿಂದ ದೂರು ನೀಡಲಾಯಿತು.




