March 18, 2026

ಪೇಜಾವರ ಸ್ವಾಮೀಜಿ ಮನುಸ್ಮತಿಯ ಪ್ರತಿಪಾದಕ: ಮುಖ್ಯಮಂತ್ರಿ ಸಿದ್ದರಾಮಯ್ಯ

0
image_editor_output_image991028549-1732691677735.jpg

ಬೆಂಗಳೂರು: ಸಂವಿಧಾನದ ಬಗ್ಗೆ ಉಡುಪಿಯ ಪೇಜಾವರ ಸ್ವಾಮೀಜಿ ಹೇಳಿಕೆ ನೀಡುವ ಅಗತ್ಯವೇನಿತ್ತು? ಅವರು ಮನುಸ್ಮತಿ ಪ್ರತಿಪಾದನೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಜಾರಿ ದಿನಾಚರಣೆಯಲ್ಲಿ ಮಾತನಾಡಿ, ಮೇಲು-ಕೀಳು, ಮೇಲ್ಜಾತಿ-ಕೆಳಜಾತಿ ಎಂಬ ತಾರತಮ್ಯ ಸರಿ ಅಲ್ಲ. ಇಂತಹ ಅಲಿಖೀತ ಸಂವಿಧಾನವನ್ನು ನಾವು ಒಪ್ಪಿಕೊಂಡುಬಿಟ್ಟಿದ್ದೇವೆ. ಇದನ್ನು ಪ್ರತಿಪಾದಿಸುವುದೇ ಮನುಸ್ಮತಿ. ಇದನ್ನು ಪ್ರಚುರಪಡಿಸುವವರೇ ಆರೆಸ್ಸೆಸ್‌ ಮತ್ತು ಬಿಜೆಪಿ ಎಂದರು.

ಸಂವಿಧಾನಕ್ಕೆ ವಿರುದ್ಧ ಇರುವವರು ಮಾತ್ರ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಾರೆ. ಪೇಜಾವರ ಶ್ರೀ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಇಂಥ ಹೇಳಿಕೆ ನೀಡುವ ಅಗತ್ಯವೇನಿತ್ತು? ಅವರೂ ಮನುಸ್ಮತಿ ಪ್ರತಿಪಾದನೆ ಮಾಡುತ್ತಾರೆ. ಸಂವಿಧಾನ ರಕ್ಷಿಸುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದೆ ಎಂದರು.ವಕ್ಫ್ ಮಂಡಳಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸನಾತನ ಮಂಡಳಿ ರಚನೆ ಆಗಬೇಕು. ನಮಗೆ ಗೌರವ ತರುವಂತಹ ಸಂವಿಧಾನ ಜಾರಿಯಾಗಬೇಕು ಎಂದು ಪೇಜಾವರಶ್ರೀ ಈಚೆಗೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!