March 18, 2026

ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಚಂದ್ರಶೇಖರನಾಥ ಸ್ವಾಮೀಜಿ

0
n6409982961732714502278219ea7cb1f94c475a61ca35e792d2f0b7a57c5172b91c7f54833a99703079131.jpg

ಬೆಂಗಳೂರು: ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಇದೀಗ ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸ್ವಾಮೀಜಿ, “ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ನಿನ್ನೆಯ ದಿನ ತಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ಹೃತ್ತೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇವೆ.” ಎಂದು ಹೇಳಿದ್ದಾರೆ.

“ಮೂಲತಃ ಒಕ್ಕಲಿಗರು ಧರ್ಮ ಸಹಿಷ್ಣುಗಳು. ನಾವು ಎಲ್ಲಾ ಧರ್ಮದವರನ್ನು ಇಲ್ಲಿಯವರೆಗೂ ಸಮಾನವಾಗಿಯೇ ಕಂಡಿರುತ್ತೇವೆ. ನಮ್ಮ ಶ್ರೀಮಠಕ್ಕೆ ಮುಸ್ಲಿಮರು ಸಹ ಸಂಪರ್ಕವಿಟ್ಟುಕೊಂಡು ಬಂದು ಹೋಗುತ್ತಿರುತ್ತಾರೆ. ನಾವು ಸಹ ಮುಸ್ಲಿಮರ ಮದುವೆ ಹಾಗೂ ಇತರ ಶುಭ ಸಮಾರಂಭಗಳಲ್ಲಿ ಭಾಗಿಯಾಗಿರುತ್ತೇವೆ. ಆದ್ದರಿಂದ ಈ ಜನಾಂಗದ ಬಗ್ಗೆ ಯಾವುದೇ ಅಸಹಿಷ್ಣುತೆ ಹೊಂದಿಲ್ಲ” ಎಂದು ಸ್ಪಷ್ಟನೆ ನೀಡಿರುವ ಸ್ವಾಮೀಜಿ, ಆ ಹೇಳಿಕೆ ವಿಚಾರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!