ಮಡಿಕೇರಿ: ಮನೆಯ ಆವರಣದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯ ಬಂಧನ

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಕಾರ್ಮಾಡು ಗ್ರಾಮದ ಮನೆಯೊಂದರ ಆವರಣದಲ್ಲಿ ನಿಷೇಧಿತ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರ್ಮಾಡು ಗ್ರಾಮದ ಮುಕ್ಕಾಟಿಕೊಪ್ಪಲು ನಿವಾಸಿ ವಿ.ಬಿ.ಮುತ್ತಣ್ಣ(68) ಬಂಧಿತ ಆರೋಪಿಯಾಗಿದ್ದು, 5 ಕೆ.ಜಿ 500ಗ್ರಾಂ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಮನೆಯ ಕಾಂಪೌಂಡ್ ಒಳಗೆ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿರುವ ಕುರಿತು ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.