ಬಂಧಿತರನ್ನು ಗಣೇಶ್, ಕಿರಣ್ ಗೌಡ, ನಾಗರಾಜ್, ವೆಂಕಟೇಶ್ ಎಂದು ಗುರುತಿಸಲಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳಾದ ದೀಪು ಹಾಗೂ ವಿನಯ್ ತಲೆಮರೆಸಿಕೊಂಡಿದ್ದಾರೆ. ಉಳಿದ ಇಬ್ಬರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಪೊಲೀಸರು ಮೇಲ್ನೋಟಕ್ಕೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.