March 15, 2025

ಶಿವಮೊಗ್ಗ |ರೌಡಿಶೀಟರ್ ರಾಜೇಶ್ ಶೆಟ್ಟಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

0

ಶಿವಮೊಗ್ಗ: ಬೊಮ್ಮನಕಟ್ಟೆ ಬಡಾವಣೆಯಲ್ಲಿ ರೌಡಿಶೀಟರ್ ರಾಜೇಶ್ ಶೆಟ್ಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಗಣೇಶ್, ಕಿರಣ್ ಗೌಡ, ನಾಗರಾಜ್, ವೆಂಕಟೇಶ್ ಎಂದು ಗುರುತಿಸಲಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳಾದ ದೀಪು ಹಾಗೂ ವಿನಯ್ ತಲೆಮರೆಸಿಕೊಂಡಿದ್ದಾರೆ. ಉಳಿದ ಇಬ್ಬರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಪೊಲೀಸರು ಮೇಲ್ನೋಟಕ್ಕೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

 

 

Leave a Reply

Your email address will not be published. Required fields are marked *

You may have missed

error: Content is protected !!