ಜೈಲಿನಿಂದ ಬಂದು ಮನೆಯಲ್ಲಿ ಕೊನೆಯುಸಿರು: 93 ವರ್ಷದ ವೃದ್ಧೆ ಕೊನೆ ಆಸೆ ಈಡೇರಿಸಿದ ಪೊಲೀಸರು
ಕಲಬುರಗಿ: ಸಾವಿನ ಕೊನೆ ಕ್ಷಣದಲ್ಲಿ ಮನೆ ಸೇರಬೇಕೆಂದು ಕೋರಿಕೆ ಇಟ್ಟಿದ್ದ 93 ವರ್ಷದ ವೃದ್ಧೆಯ ಕೊನೆ ಆಸೆಯನ್ನು ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಈಡೇರಿಸಿದ್ದಾರೆ. ಮನೆಗೆ ತೆರಳಿದ ಕೆಲ ದಿನಗಳ ಬಳಿಕ ವೃದ್ಧೆ ನಾಗಮ್ಮ ನಿಧನರಾಗಿದ್ದಾರೆ. ಆ ಮೂಲಕ ಅಂತಿಮ ಕ್ಷಣ ಮನೆಯಲ್ಲಿ ಕಳೆಯಬೇಕೆಂಬ ಅವರ ಆಸೆಯನ್ನು ಈಡೇರಿಸಲಾಗಿದೆ.
ಸೊಸೆಗೆ ಕಿರಕುಳ ನೀಡಿದ ಪ್ರಕರಣದಲ್ಲಿ ನಾಗಮ್ಮ ಆರೋಪಿಯಾಗಿದ್ದರು. ಸೊಸೆ ಮೃತಪಟ್ಟ ಹಿನ್ನಲೆ ಕಳೆದ 26 ವರ್ಷದಿಂದ ಐಪಿಸಿ ಸೆಕ್ಷನ್ 498 ಅಡಿ ನಾಗಮ್ಮ ಹಾಗೂ ಕುಟುಂಬಸ್ಥರ ವಿರುದ್ದ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.




