ಹಾಸನ: ಹೃದಯಘಾತದಿಂದ ಸಾಫ್ಟ್ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಮರ್ಥ್ (26) ಮೃತ ಸಾಫ್ಟ್ವೇರ್ ಇಂಜಿನಿಯರ್. ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

