ಉಡುಪಿ: ಮರವಂತೆ ಬೀಚ್ ನಲ್ಲಿ ತೇಲಿ ಬಂದ ಅಪರಿಚಿತ ವ್ಯಕ್ತಿಯ ಮೃತದೇಹ
ಉಡುಪಿ: ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದ ಘಟನೆ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಮರವಂತೆ ಬೀಚ್ ನಲ್ಲಿ ನಡೆದಿದೆ.
ಸ್ಥಳೀಯರ ಸಹಾಯದಿಂದ ಶವವನ್ನು ಪೊಲೀಸರು ಶವಗಾರದಲ್ಲಿ ಇರಿಸಲಾಗಿದ್ದು, ಸಂಬಂಧಿಸಿದ ವ್ಯಕ್ತಿಗಳು ಗಂಗೊಳ್ಳಿ ಠಾಣೆಯನ್ನು ಸಂಪರ್ಕಿಸಲು ಕೋರಿಕೆ, ಸ್ಥಳಕ್ಕೆ ಗಂಗೊಳ್ಳಿ ಠಾಣಾ ಪೋಲಿಸ್ ಸಿಬ್ಬಂದಿಗಳು ಭೇಟಿ ಪರೀಶಿಲನೆ ನಡೆಸಿದ್ದಾರೆ.




