ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ದರ್ಶನ್ ಮತ್ತು ಗ್ಯಾಂಗ್ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳಿಗೂ ಈಗ ಜಾಮೀನು ಮಂಜೂರಿ ಮಾಡಲಾಗಿದೆ.




